ಬೆಂಗಳೂರು:ಕನ್ನಡದ ಖ್ಯಾತ ನಿರ್ದೇಶಕ ಎಸ್ ನಾರಾಯಣ ಮತ್ತು ಕುಟುಂಬದ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದ ಅಡಿ ಇದೀಗ ಕೇಸ್ ದಾಖಲಾಗಿದೆ.ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಮಾವ ನಾರಾಯಣ, ಅತ್ತೆ ಭಾಗ್ಯವತಿ, ಪತಿ ಪವನ್ ವಿರುದ್ಧ ಸೊಸೆ ಪವಿತ್ರ ಬೆಂಗಳೂರಿನ ಜ್ಞಾನಭಾರತಿ ಠಾಣೆಗೆ ದೂರು ನೀಡಿದ್ದಾರೆ.
2021 ರಲ್ಲಿ ಎಸ್ ನಾರಾಯಣ ಪುತ್ರ ಪವನ್ ಹಾಗೂ ಪವಿತ್ರ ಮದುವೆ ನಡೆದಿತ್ತು. ಮದುವೆಯಲ್ಲಿ ವರದಕ್ಷಿಣೆ ಕೊಟ್ಟರು ಹೆಚ್ಚಿನ ಹಣಕ್ಕೆ ಒತ್ತಾಯ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಮದುವೆಯಲ್ಲಿ ಒಂದು ಲಕ್ಷ ಮೌಲ್ಯದ ಉಂಗುರ ಮದುವೆ ಖರ್ಚು ಮಾಡಿದ್ದರು ಕೆಲಸ ಇಲ್ಲದೆ ಎಸ್ ನಾರಾಯಣ ಪುತ್ರ ಪವನ್ ಮನೆಯಲ್ಲಿಯೇ ಇದ್ದ ಎಂದು ಆರೋಪಿಸಲಾಗಿದೆ.
